Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬದನ್ನೂ ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24-25 ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನಪಾನಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:24
22 ತಿಳಿವುಗಳ ಹೋಲಿಕೆ  

ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.


ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.


ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.


ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.


ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.


ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.


ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.


ಆತನಿಲ್ಲದೆ ಯಾರು ಭೋಜನ ಮಾಡಿ ಸುಖವನ್ನು ಅನುಭವಿಸುವರು?


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?


“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.


ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.


ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.


ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು