Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ; ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ; ಆದರೂ ದೇವರು ಆದ್ಯಂತವಾಗಿ ನಡಿಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಲೋಕವನ್ನು ಕುರಿತು ಆಲೋಚಿಸುವುದಕ್ಕೆ ದೇವರು ನನಗೆ ಜ್ಞಾನವನ್ನು ಕೊಟ್ಟಿದ್ದರೂ ದೇವರ ಕಾರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವೇ ಇಲ್ಲ. ದೇವರು ಪ್ರತಿಯೊಂದನ್ನೂ ತಕ್ಕ ಸಮಯದಲ್ಲಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:11
19 ತಿಳಿವುಗಳ ಹೋಲಿಕೆ  

ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?


ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.”


ಆತನು ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.


ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.


ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.


ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.


ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.


ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.


ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.


ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?


ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು. “ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.


ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು