Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಲ್ಲ ಪ್ರಾಣಿಗಳೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು, ಎಲ್ಲವೂ ಮರಳಿ ಮಣ್ಣಿಗೆ ಸೇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು; ಎಲ್ಲಾ ಮಣ್ಣಿನಿಂದಾದವು, ಎಲ್ಲಾ ಮಣ್ಣಿಗೆ ಪುನಃ ಸೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ ಬಂದವು; ಕೊನೆಗೆ ಅವು ಮಣ್ಣಿಗೆ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು. ಎಲ್ಲವೂ ಮಣ್ಣಿಗೆ ಸೇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:20
20 ತಿಳಿವುಗಳ ಹೋಲಿಕೆ  

ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.


ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು, ಪುನಃ ಮನುಷ್ಯರು ಧೂಳೇ ಆಗುವರು.


ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.


ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ, ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ ಯಾರಿಗೆ ಗೊತ್ತು?


ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.


ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ.


ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.


ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ.


ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.


ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.


ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.


ಆದರೂ ನಾಶಕ್ಕೆ ಒಳಗಾದವನು ಕೈಚಾಚುವುದಿಲ್ಲವೋ? ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವುದಿಲ್ಲವೋ?


ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.


ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.


ಮನುಷ್ಯನಾದರೋ ಸತ್ತು ಬೋರಲುಬೀಳುವನು, ಪ್ರಾಣಹೋಗಲು ಅವನ ಅಂತ್ಯವಾಗುತ್ತದೆ.


ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು