Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬುದ್ಧಿಮಾತಿಗೆ ಕಿವಿಗೊಡದ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಎಚ್ಚರದ ಮಾತಿಗೆ ಕಿವಿಗೊಡುವದನ್ನು ಬಿಟ್ಟ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯೌವನಸ್ಥನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜ್ಞಾನಿಯಾದ ಬಡಯುವಕನು ಎಚ್ಚರದ ಮಾತಿಗೆ ಕಿವಿಗೊಡದ ಮೂಢ ವೃದ್ಧರಾಜನಿಗಿಂತ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:13
11 ತಿಳಿವುಗಳ ಹೋಲಿಕೆ  

ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.


ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.


ವಕ್ರಮಾರ್ಗಿಯಾದ ಐಶ್ವರ್ಯವಂತನಿಗಿಂತ, ನಿರ್ದೋಷವಾಗಿ ನಡೆಯುವ ದರಿದ್ರನು ಶ್ರೇಷ್ಠನು.


ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.


ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.


ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು