Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಲೋಕದಲ್ಲಿ ನಾನು ಮತ್ತೊಂದು ಕೇಡನ್ನು ಕಂಡೆ. ಅದೇನೆಂದರೆ, ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲೇ ಕೊರಗುತ್ತಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಲೋಕದಲ್ಲಿ ಕೇವಲ ಈ ದುರ್ದಶೆಯನ್ನು ನೋಡಿದೆನು; ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವದರಲ್ಲಿಯೇ ಕೊರಗುತ್ತಿರುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಲೋಕದಲ್ಲಿ ದುರ್ಗತಿಯೊಂದನ್ನು ನೋಡಿದ್ದೇನೆ. ಒಬ್ಬನು ತನ್ನ ಭವಿಷ್ಯತ್ತಿಗಾಗಿ ಹಣವನ್ನು ಕೂಡಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ: ಸಂಗ್ರಹಿಸಿದ ಆಸ್ತಿ ಯಜಮಾನನಿಗೆ ಹಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:13
29 ತಿಳಿವುಗಳ ಹೋಲಿಕೆ  

ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.


“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!


ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.


ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.


ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.


ರಾಜರು ಅಪಹರಿಸಿದ್ದ ಎಲ್ಲಾ ವಸ್ತುಗಳನ್ನು ಅವನು ತಿರುಗಿ ಪಡೆದುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನೂ ಅವನ ಆಸ್ತಿಯನ್ನೂ ಬಿಡಿಸಿಕೊಂಡದ್ದಲ್ಲದೆ, ಸೆರೆಯಲ್ಲಿದ್ದ ಸ್ತ್ರೀಯರನ್ನೂ, ಉಳಿದಿದ್ದ ಜನರನ್ನು ಕರೆದುಕೊಂಡು ಬಂದನು.


ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.


ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.


ಅವನ ಹೊಟ್ಟೆಗೆ ತೃಪ್ತಿಯಿಲ್ಲವಾದ ಕಾರಣ, ಅವನು ತನ್ನ ಇಷ್ಟ ಸಂಪತ್ತಿನಲ್ಲಿ ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ.


ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.


ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.


ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು