Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ ನಾನು ಕಂಡದ್ದು ಇದೇ; ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದು ಮೇಲಾಗಿಯೂ ಉಚಿತವಾಗಿಯೂ ಇದೆ; ಇದೇ ಅವನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಕಂಡುಕೊಂಡದ್ದೇನೆಂದರೆ, ಒಬ್ಬನು ತನ್ನ ಅಲ್ಪಕಾಲದ ಜೀವಮಾನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವುದೇ ಅವನಿಗೆ ಮೇಲು. ಇದೇ ಅವನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:18
16 ತಿಳಿವುಗಳ ಹೋಲಿಕೆ  

ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.


ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.


ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.


ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.


ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.


ಆತನು ನಿಮಗೂ ಮತ್ತು ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ, ಲೇವಿಯರೂ ಮತ್ತು ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.


ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.


ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.


ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು