Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ; ಇದು ಅಜಾಗ್ರತೆಯಿಂದಾಯಿತೆಂದು ದೂತನ ಮುಂದೆ ಹೇಳಬೇಡ; ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಗೆಲಸವನ್ನು ಏಕೆ ಹಾಳುಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನಿಮ್ಮ ಮಾತುಗಳು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿ. “ನಾನು ಅಜಾಗ್ರತೆಯಿಂದ ಹೇಳಿದೆ” ಎಂದು ಯಾಜಕನಿಗೆ ತಿಳಿಸಬೇಡಿ. ಇಲ್ಲವಾದರೆ, ದೇವರು ನಿಮ್ಮ ಮಾತುಗಳಿಗೆ ಕೋಪಗೊಂಡು ನೀವು ದುಡಿದಿರುವುದನ್ನೆಲ್ಲಾ ನಾಶಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:6
23 ತಿಳಿವುಗಳ ಹೋಲಿಕೆ  

ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.


ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.


ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ಹೀಗಿರುವುದರಿಂದ ದೂತರ ನಿಮಿತ್ತವಾಗಿ ಸ್ತ್ರೀಯು ಪುರುಷನ ಅಧಿಕಾರವನ್ನು ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.


“‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,


ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.


ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.


ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು