Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಾವಿರ ವರ್ಷದ ಮೇಲೆ ಸಾವಿರ ವರ್ಷ ಬದುಕಿಯೂ ಸುಖವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಇವೆರಡೂ ಒಂದೇ ಸ್ಥಳಕ್ಕೆ ಹೋಗುತ್ತವೆ, ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಾವಿರದ ಮೇಲೆ ಸಾವಿರ ವರುಷ ಬದುಕಿಯೂ ಸುಖವನ್ನು ಅನುಭವಿಸದಿದ್ದರೆ [ಏನು ಪ್ರಯೋಜನ?] ಇವೆರಡು ಒಂದೇ ಸ್ಥಳಕ್ಕೆ ಹೋಗುತ್ತವಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ಎರಡು ಸಾವಿರ ವರ್ಷಗಳ ಕಾಲ ಬದುಕಿಯೂ ಜೀವನದಲ್ಲಿ ಸಂತೋಷಪಡದಿದ್ದರೆ ಏನು ಪ್ರಯೋಜನ? ಆ ಮಗುವೂ ಅವನೂ ಕತ್ತಲೆ ಗುಂಡಿಗೇ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಒಂದು ವೇಳೆ ಎರಡು ಸಾವಿರ ವರ್ಷಗಳು ಆ ಮನುಷ್ಯನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:6
18 ತಿಳಿವುಗಳ ಹೋಲಿಕೆ  

ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು.


ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.


ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.


ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು.


ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?


ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.


“ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.


ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು.


ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.


ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.


ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.


ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು