Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನನ ದಿನಕ್ಕಿಂತ ಮರಣ ದಿನ ಮೇಲು. ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವದು ಲೇಸು; ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ; ಜೀವಂತನು ಇದನ್ನು ನೋಡಿ ಸ್ಮರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಔತಣಕೂಟಕ್ಕೆ ಹೋಗುವುದಕ್ಕಿಂತ ಶವಸಂಸ್ಕಾರಕ್ಕೆ ಹೋಗುವುದು ಇನ್ನೂ ಉತ್ತಮ. ಯಾಕೆಂದರೆ ಎಲ್ಲರೂ ಒಂದು ದಿನ ಸಾಯಲೇಬೇಕು. ಸಾವನ್ನು ಕಂಡ ಪ್ರತಿಯೊಬ್ಬನು ಇದನ್ನು ಸ್ಮರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:2
29 ತಿಳಿವುಗಳ ಹೋಲಿಕೆ  

ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.


ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!


ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,


ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.


ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


“ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.


ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.


ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.


ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.


ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ.


ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು.


ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.


ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.


ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.


ಔತಣದ ಮನೆಯಲ್ಲಿಯೂ ಸೇರಬೇಡ, ಅಲ್ಲಿನವರೊಂದಿಗೆ ಕುಳಿತು ತಿನ್ನಬೇಡ, ಕುಡಿಯಬೇಡ.


ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು