ಪ್ರಸಂಗಿ 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಜನನ ದಿನಕ್ಕಿಂತ ಮರಣ ದಿನ ಮೇಲು. ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವದು ಲೇಸು; ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ; ಜೀವಂತನು ಇದನ್ನು ನೋಡಿ ಸ್ಮರಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಔತಣಕೂಟಕ್ಕೆ ಹೋಗುವುದಕ್ಕಿಂತ ಶವಸಂಸ್ಕಾರಕ್ಕೆ ಹೋಗುವುದು ಇನ್ನೂ ಉತ್ತಮ. ಯಾಕೆಂದರೆ ಎಲ್ಲರೂ ಒಂದು ದಿನ ಸಾಯಲೇಬೇಕು. ಸಾವನ್ನು ಕಂಡ ಪ್ರತಿಯೊಬ್ಬನು ಇದನ್ನು ಸ್ಮರಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು. ಅಧ್ಯಾಯವನ್ನು ನೋಡಿ |