Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕೆಲವರೇನೋ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಕ್ರಿಸ್ತಯೇಸುವನ್ನು ಸಾರುತ್ತಿರುವುದು ನಿಜ; ಆದರೆ ಮಿಕ್ಕವರು ಸದುದ್ದೇಶದಿಂದ ಸಾರುತ್ತಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೆಲವರು ತಮ್ಮಲ್ಲಿರುವ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಇನ್ನು ಕೆಲವರು ಸಹಾಯ ಮಾಡಬೇಕೆಂಬ ಉದ್ದೇಶದಿಂದಲೂ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಉಲ್ಲಿ ಲೊಕಾ ಕುಸ್ಡೆಪಾನ್ ಅನಿ ಭೆದ್-ಭಾವ್ ಹಾನುಚೆ ಮನುನ್ ಅನಿ ಉಲ್ಲಿ ಲೊಕಾ ಬರ್‍ಯಾ ಮನಾನ್ ಕ್ರಿಸ್ತಾಕ್ ಪರ್ಗಟ್ ಕರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:15
22 ತಿಳಿವುಗಳ ಹೋಲಿಕೆ  

ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.


ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.


ನಾನೂ, ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.


ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.


ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.


ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.


ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.


ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.


ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.


ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.


ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.


ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು