Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿಮ್ಮಲ್ಲಿಗೆ ನಾನು ಮರಳಿಬಂದಾಗ ಕ್ರಿಸ್ತಯೇಸುವಿನಲ್ಲಿ ನೀವು ಹಿರಿಹಿಗ್ಗುವುದಕ್ಕೆ ಮಹದವಕಾಶ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹೀಗೆ ನಾನು ತಿರಿಗಿ ನಿಮ್ಮಲ್ಲಿಗೆ ಬರುವದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉತ್ಸಾಹಪಡುವದಕ್ಕೆ ನನ್ನಿಂದ ಅಧಿಕವಾದ ಆಸ್ಪದವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾನು ಮತ್ತೆ ನಿಮ್ಮೊಂದಿಗಿರುವಾಗ ನೀವು ಕ್ರಿಸ್ತಯೇಸುವಿನಲ್ಲಿ ನನ್ನ ವಿಷಯವಾಗಿ ಹೆಮ್ಮೆಪಡಲು ಮತ್ತಷ್ಟು ಕಾರಣಗಳಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹೀಗೆ ನಾನು ಪುನಃ ನಿಮ್ಮ ಬಳಿಗೆ ಬರುವುದರಿಂದ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಸಂತೋಷವು ನನ್ನ ನಿಮಿತ್ತವಾಗಿ ಅತ್ಯಧಿಕವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅಶೆ ಮಿಯಾ ತುಮ್ಚ್ಯಾಕ್ಡೆ ಪರ್ತುನ್ ಯೆತಲ್ಯಾ ಸಾಟ್ನಿ ತುಮಿ ಜೆಜು ಕ್ರಿಸ್ತಾಚ್ಯಾ ವಿಶಯಾತ್ ಕುಶಿ ಹೊವ್ಕ್ ಮಾಜ್ಯಾಕ್ನಾ ಲೈ ಕಾರನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:26
14 ತಿಳಿವುಗಳ ಹೋಲಿಕೆ  

ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.


ನಾವು ನಮ್ಮನ್ನು ಮತ್ತೆ, ಮತ್ತೆ ನಿಮ್ಮೆದುರು ಹೊಗಳಿಕೊಳ್ಳುವುದಿಲ್ಲ; ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಯನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ.


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.


ಕಡೆಯದಾಗಿ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು.


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.


ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.


ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.


ಯಾಕೆಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು.


ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು