Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. ನೀವು ಹೀಗೆ ನಡೆದರೆ ನಾನು ಕೆಲಸ ಸಾಧಿಸಿದ್ದೂ ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಉತ್ಸಾಹವು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೆಚ್ಯಾ ಮದ್ದಿ ಸಗ್ಳ್ಯಾಕ್ನಿಬಿ ಜಿವ್ ಹೊವ್ನ್ ಹೊತ್ತಿ ಬರಿ ಖಬರ್ ದಾಕ್ವುನ್ ದಿತಲೆ ಹೊವ್ನ್, ಜಗಾತ್ ಹೊಳಾವ್ತಲಿ ಚುಕ್ಕಿಯಾ ಸಾರ್ಕೆ ದಿಸ್ತ್ಯಾಶಿ. ತುಮಿ ಅಶೆ ಚಲಲ್ಲೆ ಹೊಲ್ಯಾರ್ ಮಿಯಾ ಬರ್‍ಯಾ ಖಬ್ರೆಸಾಟ್ನಿ ಪಳಲೆ ಫುಕೊಟ್ ಹೊಯ್ನಾ, ಮಿಯಾ ಕಟ್ಪಟ್ ಕರಲೆಬಿ ಫುಕೊಟ್ ಹೊಯ್ನಾ ಮನ್ತಲೆ ಹೊಗ್ಳಾಪ್ ಕ್ರಿಸ್ತಾಚ್ಯಾ ದಿಸಾತ್ ಮಾಕಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:16
24 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ.


ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು.


ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.


ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.


ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.


ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.


ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.


“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.


ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.


ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.


ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.


ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.


ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.


ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.


ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.


ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು