Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಷ್ಟರೊಳಗೆ ನಾನು ಬಿರುದನ್ನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೋ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಓಡುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈಗಾಗಲೇ ನಾನು ಇದೆಲ್ಲವನ್ನು ಸಾಧಿಸಿ ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ಹೇಳುತ್ತಿಲ್ಲ. ನಾನು ಆ ಗುರಿಯನ್ನು ಇನ್ನೂ ಮುಟ್ಟಿಲ್ಲ. ಆದರೆ ಆ ಗುರಿಯನ್ನು ಮುಟ್ಟಿ ಅದನ್ನು ನನ್ನದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಇದು ಕ್ರಿಸ್ತನ ಅಪೇಕ್ಷೆ. ಆದಕಾರಣವೇ, ಕ್ರಿಸ್ತನು ನನ್ನನ್ನು ತನ್ನವನನ್ನಾಗಿ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಎವ್ಡ್ಯಾ ಪತರ್ ಮಿಯಾ ಹೆ ಸಗ್ಳ್ಯೆ ಪಡ್ದುನ್ ಘೆವ್ನ್ ಪುರಾ ಹೊಲ್ಲೊ ಮನುನ್ ಸಾಂಗಿನಾ, ಖರೆ ಮಿಯಾ ಖಲೆ ಘೆವ್ಕ್ ಸಾಟ್ನಿ ಕ್ರಿಸ್ತ್ ಜೆಜುನ್ ಮಾಕಾ ಧರುನ್ ಘೆಟ್ಲಾ ತೆಚ್ ಘೆವ್ಚೆ ಮನುನ್ ಕಟ್ಪಟ್‍ ಕರುಲ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:12
44 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.


ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.


ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.


ಅಂತೂ, ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯ ವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.


ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,


ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು.


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು!


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.


ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; ನಿನ್ನ ಬಲಗೈ ನನಗೆ ಆಧಾರವಾಗಿರುವುದು.


ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.


ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.


ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.


ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.


ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.


ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.


ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.


ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು