Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗಿರಲಾಗಿ ಪ್ರಿಯರೂ ಇಷ್ಟರೂ ಆದ ನನ್ನ ಸಹೋದರರೇ, ನನಗೆ ಸಂತೋಷವೂ ಜಯಮಾಲೆಯೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ; ಪ್ರಿಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ನಿಮ್ಮನ್ನು ನೋಡಬಯಸುತ್ತೇನೆ. ನೀವು ನನಗೆ ಆನಂದವನ್ನು ಉಂಟುಮಾಡಿ, ನಿಮ್ಮ ವಿಷಯದಲ್ಲಿ ನಾನು ಹೆಮ್ಮಪಡುವಂತೆ ಮಾಡಿದ್ದೀರಿ. ನಾನು ನಿಮಗೆ ಹೇಳಿದಂತೆ ಪ್ರಭುವನ್ನು ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಸೆ ಹೊವ್ನ್ ಲೈ ಪ್ರೆಮಾಚೆ, ಅನಿ ಬರೆ ಹೊವ್ನ್ ಹೊತ್ತ್ಯಾ ಮಾಜ್ಯಾ ಭಾವಾನು ಅನಿ ಭೆನಿಯಾನು, ಮಾಜಿ ಖುಶಿ, ಅನಿ ಮುಕುಟ್ ಹೊವ್ನ್ ಹೊತ್ತಾ ಪ್ರಿಯಾನು, ಧನಿಯಾಕ್ಡೆ ಘಟ್ಟ್ ಹೊವ್ನ್ ಇಬೆ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:1
35 ತಿಳಿವುಗಳ ಹೋಲಿಕೆ  

ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.


ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು.


ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.


ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.


ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.


ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.


ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.


ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.


ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.


ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.


ಅದನ್ನು ಹೆಗಲ ಮೇಲೆ ಇಟ್ಟುಕೊಳ್ಳುತ್ತಿದ್ದೆನು, ಕಿರೀಟವನ್ನಾಗಿ ಧರಿಸುತ್ತಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು