Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ಯಾವುದೋ ಕೊರತೆಯಲ್ಲಿರುವೆನೆಂದು ಸೂಚಿಸಲು ಇದನ್ನು ಹೇಳುತ್ತಿಲ್ಲ. ನಾನು ಯಾವ ಸ್ಥಿತಿಯಲ್ಲಿದ್ದರೂ ತೃಪ್ತಿಯಿಂದಿರಲು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕೊರತೆಯಲ್ಲಿದ್ದೇನೆಂದು ಸೂಚಿಸುವದಕ್ಕೆ ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಈ ಮಾತುಗಳನ್ನು ಹೇಳುತ್ತಿರುವುದು ನನಗಿರುವ ಕೊರತೆಯ ದೆಸೆಯಿಂದಲ್ಲ. ನನ್ನಲ್ಲಿರುವಂಥವುಗಳಲ್ಲಿ ಮತ್ತು ನನಗೆ ಸಂಭವಿಸುವ ಪ್ರತಿಯೊಂದರಲ್ಲಿ ತೃಪ್ತನಾಗಿರಲು ನಾನು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತರಾಸ್ ಹಾಯ್ ಮನುನ್ ಮಿಯಾ ಹೆ ಸಾಂಗುಕ್ನಾ ಮಿಯಾ ತರ್ ಹೊತ್ತ್ಯಾ ಪರಿಸ್ಥಿತ್ನಾ ಖುಶಿ ಹೊವ್ನ್ ರ್‍ಹಾತಲೆ ಶಿಕುನ್ಗೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:11
13 ತಿಳಿವುಗಳ ಹೋಲಿಕೆ  

ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.


ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.


ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.


ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.


ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,


ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು