Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಫಿಲಿಪ್ಪಿಯವರೇ, ನಾನು ಪ್ರಾರಂಭದಲ್ಲಿ ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ, ಮಕೆದೋನ್ಯದಿಂದ ಹೊರಟುಹೋದಾಗ ಕೊಡುವ, ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಯೂ ನನಗೆ ಬೆಂಬಲಿಸಲ್ಲಿಲ್ಲವೆಂಬುದನ್ನು ನೀವೂ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಫಿಲಿಪ್ಪಿಯ ಸಹೋದರರೇ, ನಾನು ಶುಭಸಂದೇಶವನ್ನು ಸಾರಲು ಹೊರಟ ಪ್ರಾರಂಭದ ದಿನಗಳಲ್ಲಿ ಮಕೆದೋನಿಯವನ್ನು ಬಿಟ್ಟುಹೋದಾಗ ನೀವಲ್ಲದೆ ಬೇರೆ ಯಾವ ಸಭೆಯೂ ನನ್ನ ಆಯ-ವ್ಯಯಗಳಲ್ಲಿ ನೆರವಾಗಿರಲಿಲ್ಲ. ಇದು ನಿಮಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಫಿಲಿಪ್ಪಿಯವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನ್ಯದಿಂದ ಹೊರಟು ಹೋದಾಗ ಕೊಡುವ ಕೊಳ್ಳುವ ವಿಷಯದಲ್ಲಿ ನಿಮ್ಮ ಹೊರತು ಬೇರೆ ಯಾವ ಸಭೆಗೂ ನನಗೂ ಸಂಬಂಧವಿರಲಿಲ್ಲವೆಂದು ನೀವೂ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇದಲ್ಲದೆ ಫಿಲಿಪ್ಪಿ ಪಟ್ಟಣದವರೇ, ನಾನು ಮೊದಲು ನಿಮ್ಮಲ್ಲಿ ಸುವಾರ್ತೆಯನ್ನು ಸಾರಿ ಮಕೆದೋನಿಯಕ್ಕೆ ಹೊರಟಾಗ, ನಿಮ್ಮ ಸಭೆಯೊಂದೇ ನನಗೆ ಸಹಾಯ ಮಾಡಿದ್ದು ನಿಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಫಿಲಿಪ್ಪಿಯವರೇ, ನಾನು ಪ್ರಾರಂಭ ದಿನಗಳಲ್ಲಿ ನಿಮ್ಮ ನಡುವೆ ಸುವಾರ್ತೆ ಸಾರಿ ಮಕೆದೋನ್ಯದಿಂದ ಹೊರಟುಹೋದಾಗ, ನಿಮ್ಮನ್ನು ಬಿಟ್ಟು ಬೇರಾವ ಸಭೆಯವರು ಕೊಡುವ ಮತ್ತು ತೆಗೆದುಕೊಳ್ಳುವ ವಿಷಯದಲ್ಲಿ ಯಾರೂ ನನ್ನೊಂದಿಗೆ ಪಾಲುಗಾರರಾಗಲಿಲ್ಲ ಎಂಬುದನ್ನು ನೀವು ತಿಳಿದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ಪಿಲಿಪ್ಪಿತ್ಲ್ಯಾ ಲೊಕಾನು, ಬರಿ ಖಬರ್ ಶುರು ಕರ್‍ತಾನಾ ಮಿಯಾ ಮೆಸೆದೊನಿಯಾಕ್ನಾ ಜಾತಾನಾ ದಿತಲ್ಯಾ, ಅನಿ ಘೆತಲ್ಯಾ ವಿಶಯಾತ್ ತುಮ್ಕಾ ಸೊಡುನ್ ದುಸ್ರ್ಯಾ ತಾಂಡ್ಯಾಚೆ ಮಾಜ್ಯಾ ವಾಂಗ್ಡಾ ಭಾಗಿದಾರ್ ಹೊವ್ನ್ ನಾತ್, ಮನ್ತಲೆ ತುಮ್ಕಾಬಿ ಗೊತ್ತುಚ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:15
12 ತಿಳಿವುಗಳ ಹೋಲಿಕೆ  

ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.


ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.


ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.


ಅದಕ್ಕೆ ಎಲೀಷನು, “ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ.


ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.


ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.


ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.


ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ.


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು