Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸತ್ಯ ಸಯುಜನೇ, ಅವರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ವಾಂಗ್ಡಿಯಾನೊ, ತಿಯಾ ತ್ಯಾ ಬಾಯ್ಕಾಮಾನ್ಸಾಕ್ನಿ ಮಜ್ಜತ್‍ಕಾರಿ ಹೊವ್ನ್ ರ್‍ಹಾವ್ಚೆ ಮನುನ್ ತುಜ್ಯಾಕ್ಡೆ ಮಾಗ್ತಾ, ತೆನಿ ಕ್ಲೆಮನ್ಸ್, ಅನಿ ಹುರಲ್ಲ್ಯಾ ಮಾಜ್ಯಾ ವಾಂಗ್ಡಿ ಕಾಮ್ ಕರ್‍ತಲೆ ಅನಿ ಮಾಜ್ಯಾ ವಾಂಗ್ಡಾ ಬರಿ ಖಬರ್ ಸಾಂಗುಕ್ ಕಟ್ಪಟ್ ಕರಲ್ಯಾಂಚಿ ನಾವಾ ಜಿವಾಚ್ಯಾ ಪುಸ್ತಕಾತ್ ಲಿವಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:3
28 ತಿಳಿವುಗಳ ಹೋಲಿಕೆ  

ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.


ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.


ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.


ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ, ತ್ರುಫೋಸಳಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.


ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.


ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.


ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.


ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.


ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.


ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.


ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.


ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು