Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವಶಾಂತಿಯು ಕ್ರಿಸ್ತ ಯೇಸುವಿನಲ್ಲಿ ನಿಮ್ಮ ಹೃದಯಗಳನ್ನೂ ಮನಸ್ಸುಗಳನ್ನೂ ಕಾಯುವುದು. ದೇವರು ಕೊಡುವ ಆ ಶಾಂತಿಯು ನಾವು ಅರ್ಥಮಾಡಿಕೊಳ್ಳಲಾಗದಷ್ಟು ಅಗಮ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ತುಮಿ ಚಿಂತುನ್ ರಾಯ್ನಾಸಲ್ಯಾ ನಮನಿ ದೆವಾಚೆ ಶಾಂತ್ಪಾನ್ ತುಮ್ಚಿ ಮನಾ ಅನಿ ಕಾಳ್ಜಿ ಕ್ರಿಸ್ತ್ ಜೆಜು ವೈನಾ ರಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:7
43 ತಿಳಿವುಗಳ ಹೋಲಿಕೆ  

“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.


ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.


ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು, ಇದರಿಂದ ನಿನಗೆ ಶುಭವಾಗುವುದು.


ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ


ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.


ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.


ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ, ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿರುವಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.


ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.


ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.


ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.


ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.


ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.


ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.


ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,


ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ.


ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ,


ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,


ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಗಳನ್ನೂ ನೀಗಿಸುವನು.


ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು