Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಮಗನಾದ ಒನೇಸಿಮನಿಗಾಗಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ನಾನು ಸೆರೆಮನೆಯಲ್ಲಿರುವಾಗ ಅವನು ನನ್ನ ಮಗನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ಏಕೆಂದರೆ ನಾನು ಸೆರೆಯಲ್ಲಿದ್ದಾಗ ಅವನು ನನಗೆ ಆತ್ಮಿಕ ಮಗನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಿಯಾ ಬಂಧಿಖಾನ್ಯಾತ್ ಹೊತ್ತ್ಯಾ ತನ್ನಾ, ಜೊಡುನ್ ಘೆಟಲ್ಲ್ಯಾ ಮಾಜ್ಯಾ ಲೆಕಾ ಸಾರ್ಕ್ಯಾ ಓನೆಜಿಮಸಾಚ್ಯಾಸಾಟ್ನಿ ಮಿಯಾ ವಿನಂತಿ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:10
14 ತಿಳಿವುಗಳ ಹೋಲಿಕೆ  

ಅವನನ್ನು ನಂಬಿಗಸ್ತನು ಮತ್ತು ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.


ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.


ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.


ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.


ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.


ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.


ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.


ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿರುವಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದೆನು.


ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು