Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನ ವಿಧೇಯತೆಯಲ್ಲಿ ಭರವಸೆವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳುವುದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುತ್ತಿ ಎಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ಕೋರಿಕೆಯನ್ನು ನೆರವೇರಿಸುವೆ ಎಂಬ ಭರವಸೆಯಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ಮಾಡುವೆಯೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಮಾತನ್ನು ಕೇಳುವಿ ಎಂಬ ಭರವಸವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ಕೇಳಿಕೊಂಡದ್ದನ್ನು ನೀನು ಮಾಡುವೆ ಎಂದು ನನಗೆ ಗೊತ್ತಿರುವುದರಿಂದಲೇ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಿಗೆ ನೀನು ಮಾಡುವೆ ಎಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿನ್ನ ವಿಧೇಯತೆಯಲ್ಲಿ ಭರವಸೆಯುಳ್ಳವನಾಗಿ ನಾನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುವೆಯೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಇಚಾರಲ್ಲೆ ತಿಯಾ ತಿರಸ್ಕಾರ್ ಕರಿನೆ ಮನ್ತಲ್ಯಾ ಬರೊಸ್ಯಾನ್ ಎವ್ಡೆಚ್ ನ್ಹಯ್, ಮಿಯಾ ಸಾಂಗಲ್ಲ್ಯಾನ್ಕಿ ಜಾಸ್ತಿಚೆ ತಿಯಾ ಕರ್ತೆ ಮನ್ತಲ್ಯಾ ಖಾತ್ರಿನ್ ಮಿಯಾ ತುಕಾ ಲಿವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:21
6 ತಿಳಿವುಗಳ ಹೋಲಿಕೆ  

ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.


ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ.


ನಿಮ್ಮ ಮೇಲೆ ನನಗೆ ಎಲ್ಲಾ ವಿಧಗಳಲ್ಲಿಯೂ ಪೂರ್ಣ ಭರವಸೆ ಇರುವುದರಿಂದ ನಾನು ಸಂತೋಷಪಡುತ್ತೇನೆ.


ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತಾಗಿ ನನಗೆ ಭರವಸೆ ಉಂಟು. ನಿಮ್ಮಲ್ಲಿ ಬೇಧವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ, ಅವನು ದಂಡನೆಯನ್ನು ಅನುಭವಿಸುವನು.


ಇವರಿಬ್ಬರ ಸಂಗಡ ನಮ್ಮ ಸಹೋದರರಲ್ಲಿ ಮತ್ತೊಬ್ಬನನ್ನು ಕಳುಹಿಸಿದ್ದೇವೆ; ನಾವು ಅನೇಕ ಸಮಯದಲ್ಲಿಯೂ, ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತನೆಂದು ತಿಳಿದುಕೊಂಡಿದ್ದೇವೆ; ಈಗ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.


ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು