Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತಿ ಎಕ್ ಝಿಲ್ಗ್ಯಾಕ್ ಜಲಮ್ ದಿತಾ, ತೆಕಾ ತಿಯಾ ‘ಜೆಜು’ ಮನುನ್ ನಾವ್ ಥವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಚ್ಯಾ ಲೊಕಾಕ್ನಿ ತೆಂಚ್ಯಾ ಪಾಪಾನಿತ್ನಾ ಸುಟ್ಕಾ ದಿತಾ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:21
36 ತಿಳಿವುಗಳ ಹೋಲಿಕೆ  

“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.


ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.


ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.


ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”


ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.


ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.


ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.


ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.


ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು