Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮತ್ತು ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತರಕ್ಕೆ ಕರೆದು ದೆವ್ವಗಳನ್ನು ಬಿಡಿಸುವದಕ್ಕೂ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುವದಕ್ಕೂ ಅವರಿಗೆ ಅಧಿಕಾರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ಅಶುದ್ಧಾತ್ಮಗಳನ್ನು ಓಡಿಸುವುದಕ್ಕೂ ಎಲ್ಲಾ ತರವಾದ ವ್ಯಾಧಿಯನ್ನೂ ರೋಗವನ್ನೂ ಸ್ವಸ್ಥಮಾಡುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಅಪ್ನಾಚ್ಯಾ ಬಾರಾ ಶಿಸಾಕ್ನಿ ಎಕಾಕ್ಡೆ ಬಲ್ವುಲ್ಯಾನ್, ಅನಿ ತೆಂಕಾ ಗಿರೆ ಕಾಡ್ತಲೊ, ಅನಿ ಸಗ್ಳಿ ರೊಗಾ, ಅನಿ ದುಕ್ನಿ ಅರಾಮ್ ಕರ್‍ತಲೊ ಅದಿಕಾರ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:1
26 ತಿಳಿವುಗಳ ಹೋಲಿಕೆ  

ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.


ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.


ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.


ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;


ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.


ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.


ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.


ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.


ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು.


ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು