Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಗುರುವಿನಂತೆ ಆಗುವದು ಶಿಷ್ಯನಿಗೆ ಸಾಕು, ಧಣಿಯಂತೆ ಆಗುವದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟ ಮೇಲೆ ಆತನ ಮನೆಯವರನ್ನು ಏನಂದಾರು? ಆದರೂ ಅವರಿಗೆ ಹೆದರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಎಕ್ ಶಿಕ್ತಲ್ಯಾಕ್ ಬರೆ ಕರುನ್ ಶಿಕುನ್ ಮಾಸ್ತರಾ ಸರ್ಕೊ ಹೊವ್ಕ್ ಹೊತಾ, ಅನಿ ಎಕ್ ಸೆವಕಾಕ್ ಧನಿಯಾ ಸರ್ಕೊ ಹೊವ್ಕ್ ಹೊತಾ. ಘರಾಚ್ಯಾ ವಡ್ಲಾಕುಚ್, ಗಿರ್‍ಯಾಚೊ ಮುಖಂಡ್ ಬೆಎಲ್ಜೆಬುಲ್, ಮನುನ್ ಬಲ್ವುಲ್ಯಾರ್, ಘರಾತ್ಲ್ಯಾ ಹುರಲ್ಲ್ಯಾ ಲೊಕಾಕ್ನಿ ಕವ್ಡೆ ಬುರ್ಶ್ಯಾ ನಾವಾನ್ ಬಲ್ವುಲ್ಯಾತ್ ಅಸಿಲ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:25
13 ತಿಳಿವುಗಳ ಹೋಲಿಕೆ  

ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು.


ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.


ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು.


ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.


ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.


ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.


ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.


ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?


ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.


ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.


ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ,


ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.


ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು