Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕದ ಮತ್ತಾಯ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಫಿಲಿಪ್ಪ, ಬಾರ್ತೊಲೊಮಾಯ; ತೋಮ, ಸುಂಕದವನಾದ ಮತ್ತಾಯ; ಅಲ್ಫಾಯನ ಮಗ ಯಾಕೋಬ, ತದ್ದಾಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಫಿಲಿಪ್, ಅನಿ ಬಾರ್‍ತೊಲೊಮೆವ್; ಥೊಮಸ್, ಅನಿ ತೆರ್‍ಗಿ ವಸುಲ್ ಮಾತೆವ್, ಅಲ್ಫೆವಾಚೊ ಲೆಕ್ ಜಾಕೊಬ್,ತಾದ್ದೆವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:3
30 ತಿಳಿವುಗಳ ಹೋಲಿಕೆ  

ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.


ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,


ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.


ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.


ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.


ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.


ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.


ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,


ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;


ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.


ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?


ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.


ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.


ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.


ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.


ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು.


ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು.


ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು