Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು. ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ - ಅನ್ಯಜನಗಳ ಕಡೆಗೆ ಹೋಗಬೇಡಿರಿ, ಸಮಾರ್ಯರ ಊರೊಳಗೆ ಕಾಲಿಡಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟಿದ್ದೇನೆಂದರೆ: “ಯೆಹೂದ್ಯರಲ್ಲದವರ ಬಳಿಗೆ ಹೋಗಬೇಡಿರಿ, ಸಮಾರ್ಯರ ಊರನ್ನೂ ಪ್ರವೇಶಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹ್ಯಾ ಬಾರಾ ಜಾನಾ ಶಿಸಾಕ್ನಿ ಜೆಜುನ್ ಸುಚ್ನಾ ದಿವ್ನ್, “ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ನಾಹೊಲ್ಯಾರ್ ಸಮಾರಿಯಾಚ್ಯಾ ಗಾಂವಾತ್ನಿ ಜಾವ್‍ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:5
27 ತಿಳಿವುಗಳ ಹೋಲಿಕೆ  

ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.


ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.


ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,


ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.


ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?


ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.


ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,


“ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,


ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.


ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.


ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.


ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.


ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.


ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,


ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,


ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು