Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮಗೆ ಗ್ರಹಿಸುವದಕ್ಕೆ ಮನಸ್ಸಿದ್ದರೆ ಬರತಕ್ಕ ಎಲೀಯನು ಇವನೇ ಎಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳು ಹೇಳಿದ್ದನ್ನು ನೀವು ನಂಬುವುದಾದರೆ ಈ ಯೋಹಾನನೇ ಎಲೀಯನು. ಅವನು ಬರುತ್ತಾನೆಂದು ಧರ್ಮಶಾಸ್ತ್ರವೂ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಇದನ್ನು ಸ್ವೀಕರಿಸುವುದಕ್ಕೆ ಮನಸ್ಸಿದ್ದರೆ, ಬರತಕ್ಕ ಎಲೀಯನು ಈ ಯೋಹಾನನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ತುಮಿ ತೆಂಚ್ಯಾ ಗೊಸ್ವಿಯಾಂಚ್ಯಾ ವರ್‍ತಿ ವಿಶ್ವಾಸ್ ಕರುಕ್ ಮನುನ್ ಯೌಜುಲ್ಯಾಸಿ ಜಾಲ್ಯಾರ್ ಯೆತಲೊ ಹಾಯ್ ಮನುನ್ ಸಾಂಗಲ್ಲೊ ಎಲಿಯಾ ಜುವಾಂವುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:14
12 ತಿಳಿವುಗಳ ಹೋಲಿಕೆ  

ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.


ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ.


“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.


ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು