Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 :ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೇಗಂದರೆ - ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ [ಕೂತುಕೊಂಡು] ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅನಿ,ಖೊರಾಜಿನಾ, ಮಿಯಾ ತುಜಿ ಗತ್ ಕಾಯ್ ಸಾಂಗು! ಬೆತ್ಸಾಯಿದಾ, ತುಜಿಬಿ ಗತ್ ಮಿಯಾ ಕಾಯ್ ಸಾಂಗು! ತುಮ್ಚ್ಯಾ ಮದ್ದಿ ಕರಲ್ಲಿ ತವ್ಡಿ ವಿಚಿತ್ರ್ ಕಾಮಾ ಮಿಯಾ ತಿರ್ ಅನಿ ಸಿದೊನಾತ್ ಕರ್ಲ್ಯಾರ್ ಥೈತ್ಲಿ ಲೊಕಾ ಅಪ್ನಿ ಪಾಪಾನಿತ್ನಾ ದೆವಾಕ್ಡೆ ಪರತ್ಲಾವ್ ಮನುನ್ ದಾಕ್ವುಕ್ ಕನ್ನಾಚ್ಕಿ ಆಂಗಾರ್ ಗೊನಿಚಿಲ್ ಘಾಲುನ್ ಘೆವ್ನ್ ರಕ್ಕಾ ಆಂಗಾ ವರ್‍ತಿ ಸಿಪ್ಡುನ್ ಘೆಯ್ ಹೊತ್ತಿ ಕಾಯ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:21
31 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.


ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.


ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.


ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.


ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.


ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.


ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.


ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.


ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.


ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.


ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.


ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.


“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.


ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.


ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.


ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು.


ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.


ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?


ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.


ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.


ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು