Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ಮೊಟಿ-ಮೊಟಿ ವಜ್ಜಿ ವಾವುನ್ ಘೆವ್ನ್ ಹಾರುನ್ ಗೆಲ್ಲ್ಯಾ ಸಗ್ಳ್ಯಾ ಲೊಕಾನು, ಮಾಜೆಕ್ಡೆ ಯೆವಾ, ಅನಿ ಮಿಯಾ ತುಮ್ಕಾ ಅರಾಮ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:28
36 ತಿಳಿವುಗಳ ಹೋಲಿಕೆ  

ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.


ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.


ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.


ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.


ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.


ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.


ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.


ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.


ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?


ಜ್ವಾಲೆಗಳು ಮೇಲಕ್ಕೆ ಹಾರುವುದು, ಮನುಷ್ಯರು ಶ್ರಮೆಯನ್ನು ಅನುಭವಿಸುವುದೂ ಸಹಜ.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ


ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


“ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.


ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.


ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು