Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮಾಜೊ ಜುವ್ ಘೆವಾ, ಅನಿ ಖಾಂಜ್ಯಾರ್ ಥವ್ನ್ ಘೆವಾ ಅನಿ ಮಾಜೆಕ್ನಾ ಶಿಕಾ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಖಾಲ್ತಿ ಹೊವ್ನ್ ಚಲ್ತಲ್ಯಾ ಮನಾಚೊ ಅನಿ ಭೊಳೊ; ಅನಿ ತುಮ್ಕಾ ಆರಾಮ್ ಘೆವ್ಕ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:29
38 ತಿಳಿವುಗಳ ಹೋಲಿಕೆ  

ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.


ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.


“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.


ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.


“ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.


ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,


ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ನಾನು ದೇವರ ಧರ್ಮಶಾಸ್ತ್ರ ಇಲ್ಲದವನಲ್ಲ, ಕ್ರಿಸ್ತನ ನಿಯಮಕ್ಕೊಳಗಾದವನೇ; ಆದರೂ ಧರ್ಮಶಾಸ್ತ್ರಕ್ಕೆ ಹೊರತಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಧರ್ಮಶಾಸ್ತ್ರ ಬಾಹಿರನಂತಾದೆನು.


“ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.


ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.


ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.


ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.


ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.


ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರಿಗೆ ವಿಶ್ರಾಂತಿ ನೀಡಿ, ನಿಮಗೆ ಅನುಕೂಲವಾದ ಉಪಶಮನವು ಇದೇ” ಎಂದು ಹೇಳುವಾಗ ಇವರು ಕೇಳದೆ ಹೋದರು.


ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.


ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು