Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೊವಾನ್ನನಿಂದ ಬಂದಿದ್ದ ಶಿಷ್ಯರು ಹೊರಟುಹೋದಾಗ, ಯೇಸುಸ್ವಾಮಿ ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಮಾತನಾಡಿದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಹೊರಟುಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ - ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೋಹಾನನ ಶಿಷ್ಯರು ಹೊರಟುಹೋಗುತ್ತಿರಲು ಯೇಸುವು ಜನರೊಡನೆ ಯೋಹಾನನನ್ನು ಕುರಿತು ಮಾತನಾಡಲು ಪ್ರಾರಂಭಿಸಿದನು. ಯೇಸು, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಹೊರಟು ಹೋಗುತ್ತಿದ್ದಾಗ, ಯೇಸು ಯೋಹಾನನ ಕುರಿತಾಗಿ ಜನಸಮೂಹಕ್ಕೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜುಂವಾವಾಚಿ ಶಿಸಾ ಥೈತ್ನಾ ಗೆಲ್ಲ್ಯಾ ತನ್ನಾ ಜೆಜು ಜುವಾಂವಾಚ್ಯಾ ವಿಶಯಾತ್ ಲೊಕಾನಿಕ್ಡೆ ಬೊಲುಕ್‍ಲಾಗ್ಲೊ. “ಡಂಗ್ಳಿತ್ ಜುವಾಂವಾಕ್ಡೆ ಗೆಲ್ಲ್ಯಾ ತನ್ನಾ ಕಾಯ್ ಬಗುಕ್ ಮನುನ್ ಗೆಲ್ಲ್ಯಾಶಿ? ವಾರ್‍ಯಾನ್ ಹಾಲ್ತಲಿ ಎಕ್ ಕರಾಡಾಚಿ ಕಾಡಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:7
15 ತಿಳಿವುಗಳ ಹೋಲಿಕೆ  

ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.


ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!


ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.


ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂದಿತು ಪರಲೋಕದಿಂದಲೋ ಅಥವಾ ಮನುಷ್ಯರಿಂದಲೋ?” ಅಂದನು. ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವು ಅವನನ್ನು ಏಕೆ ನಂಬಲಿಲ್ಲ’ ಎಂದು ನಮಗೆ ಕೇಳಿಯಾನು;


ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು,


ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.


ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.


ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು