Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬತ್ತಿದ ಕೈಯುಳ್ಳ ಒಬ್ಬ ವ್ಯಕ್ತಿ ಅಲ್ಲಿದ್ದನು. ಯೇಸುವಿನ ಮೇಲೆ ತಪ್ಪುಹೊರಿಸುವ ಉದ್ದೇಶದಿಂದ ಕೆಲವರು, “ಸಬ್ಬತ್ ದಿನ ಸ್ವಸ್ಥಗೊಳಿಸುವುದು ಶಾಸ್ತ್ರಬದ್ಧವೇ?" ಎಂದು ಯೇಸುವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅವರು ಆತನ ಮೇಲೆ ತಪ್ಪುಹೊರಿಸಬೇಕೆಂದು ಆತನನ್ನು - ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವದು ಸರಿಯೋ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಭಾಮಂದಿರದಲ್ಲಿ ಒಬ್ಬನ ಕೈ ಊನವಾಗಿತ್ತು. ಯೆಹೂದ್ಯರಲ್ಲಿ ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸುವುದಕ್ಕಾಗಿ ಕಾರಣ ಹುಡುಕುತ್ತಿದ್ದರು. ಆದ್ದರಿಂದ ಅವರು ಯೇಸುವಿಗೆ “ಸಬ್ಬತ್‌ದಿನದಲ್ಲಿ ಗುಣಪಡಿಸುವುದು ಸರಿಯೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯಸಮ್ಮತವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಥೈ ವಾರ್‍ಯಾನ್‍ಮಾರಲ್ಲ್ಯಾ ಹಾತಾಚೊ ಎಕ್ ಮಾನುಸ್ ಹೊತ್ತೊ. ಉಲ್ಲಿ ಲೊಕಾ ಜೆಜು ಕಾಯ್ತರ್ ಚುಕ್ ಕರ್‍ತಾ ಕಾಯ್ ಬಗುನ್ ತೆಚೆ ವರ್‍ತಿ ಝುಟೊ ಅಪ್ವಾದ್ ಘಾಲುಚೆ ಮನುನ್ ರಾಕುಂಗೆತ್ ಹೊತ್ತಿ. ತೆಚೆಸಾಟ್ನಿ ತೆನಿ ಜೆಜುಕ್, “ಅರಾಮ್ ಘೆತಲ್ಯಾ ದಿಸಿ ಮಟ್ಲ್ಯಾರ್ ಸಾಬ್ಬತಾಚ್ಯಾ ದಿಸಿ ಎಕ್ಲ್ಯಾಕ್ ಗುನ್ ಕರ್‍ತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಚುಕ್ ನ್ಹಯ್ ಕಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:10
21 ತಿಳಿವುಗಳ ಹೋಲಿಕೆ  

ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.


ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.


ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.


ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,


ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.


ಆದರೆ ಫರಿಸಾಯರು ಅದನ್ನು ಕಂಡು, “ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ” ಎಂದು ಆತನಿಗೆ ಹೇಳಿದರು.


ಮಂದೆಯನ್ನು ಕಾಯದೆ ಬಿಟ್ಟು ಬಿಟ್ಟ ಕುರುಬನ ಗತಿಯನ್ನು ಏನು ಹೇಳಲಿ? ಖಡ್ಗವು ಅವನ ತೋಳಿಗೂ, ಬಲಗಣ್ಣಿಗೂ ತಾಗುವುದು; ಅವನ ತೋಳು ತೀರಾ ಒಣಗಿಹೋಗುವುದು. ಅವನ ಬಲಗಣ್ಣು ಪೂರಾ ಮೊಬ್ಬಾಗುವುದು.”


ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.


ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)


“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.


ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.


ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.


ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.


ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು