Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನನ್ನ ಪರವಾಗಿ ಇಲ್ಲದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನನ್ನ ಪಕ್ಷ ಹಿಡಿಯದವನು ನನಗೆ ವಿರೋಧಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನನ್ನೊಂದಿಗೆ ಇಲ್ಲದವನು ನನಗೆ ವಿರೋಧಿಯಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜೊ ಕೊನ್ ಮಾಜೆ ವಾಂಗ್ಡಾ ನಾ, ತೊ ಮಾಜ್ಯಾ ವಿರೊದುಚ್; ಜೊ ಕೊನ್ ಮಾಕಾ ಗೊಳಾ ಕರುಕ್ ಮಜತ್ ಕರಿನಾ ತೊ ಮಾಳ್ಬರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:30
16 ತಿಳಿವುಗಳ ಹೋಲಿಕೆ  

ನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.


ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.


ಯೇಸು ಅವನಿಗೆ, “ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ” ಎಂದು ಹೇಳಿದನು.


“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.


ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು


ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.


ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.


ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು