Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯ ವಸ್ತುಗಳನ್ನು ತೆಗೆಯುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟ ವಸ್ತುಗಳನ್ನು ತೆಗೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಎಕ್ ಬರೊ ಮಾನುಸ್, ಅಪ್ನಾಚ್ಯಾ ಮನಾತ್ನಾ ಬರೆಚ್ ಭಾಯ್ರ್ ಕಾಡ್ತಾ. ಎಕ್ ಬುರ್ಸೊ ಮಾನುಸ್ ಅಪ್ನಾಚ್ಯಾ ಮನಾತ್ನಾ ಬುರ್ಶೆಚ್ ಭಾಯ್ರ್ ಕಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:35
17 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ, ದುಷ್ಟನ ಬಾಯಿ ಕೆಟ್ಟದ್ದನ್ನು ಕಾರುತ್ತದೆ.


ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.


ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!


ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.


ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.


ಹಾಗೆಯೇ ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;


ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು