Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಒಬ್ಬನು ವಾಕ್ಯವನ್ನು ಕೇಳಿ ತಿಳುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರುವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ; ಇವನೇ ಒಳ್ಳೆಯ ನೆಲವಾಗಿರುವವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಬರ್‍ಯಾ ಮಾಟಿತ್ ಸಿಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ದೆವಾಚಿ ಬರಿ ಖಬರ್ ಆಯ್ಕುನ್ ಅರ್ತ್‍ ಕರುನ್ ಘೆಟಲ್ಲಿ ಲೊಕಾ. ತೆಂಚ್ಯಾತ್ಲಿ ಉಲ್ಲಿ ಲೊಕಾ, ಸೆಂಬರಾಕ್ ಸೆಂಬರ್ ಫಳ್ ದಿತ್ಯಾತ್, ಉಲ್ಲೆ ಜಾನಾ ಸಾಟ್, ಅನಿ ಉಲ್ಲೆ ಜಾನಾ ತಿಸ್”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:23
43 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


“ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.


ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.


ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.


ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.


ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.


ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.


ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.


ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.


ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.


ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.


ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


“ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?


ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.


ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು