Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಳಿಕ ಯೇಸು ಅವರಿಗೆ ಇನ್ನೊಂದು ಸಾಮ್ಯದ ಮೂಲಕ ಬೋಧಿಸಿದನು. ಅದೇನೆಂದರೆ: “ಪರಲೋಕರಾಜ್ಯ ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ರೈತನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮಾನಾ ಜೆಜುನ್ ತೆಂಕಾ ಅನಿ ಎಕ್ ಕಾನಿ ಸಾಂಗಟ್ಲ್ಯಾನ್. ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಮಾನ್ಸಾನ್ ಅಪ್ನಾಚ್ಯಾ ಶೆತಾತ್ ಬರೆ ಭ್ಹಿಂಯ್ ಪೆರಲ್ಲ್ಯಾ ಸರ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:24
23 ತಿಳಿವುಗಳ ಹೋಲಿಕೆ  

“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.


“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.


“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.


“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.


ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ?


ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?


ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”


ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.


ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.


ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”


“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.


“ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,


ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.


ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ.


ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು