Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ತಾಬೊಡ್ತೊಬ್ ಜೆಜು ತೆಚೆಕ್ಡೆ ಯೆಲೊ ಅನಿ ತೆಕಾ ಧರ್‍ಲ್ಯಾನ್. ಅನಿ, “ಕವ್ಡೊ ಕಮಿ ವಿಶ್ವಾಸ್ ತುಜೊ! ತಿಯಾ ಕಶ್ಯಾಕ್ ಸಂಶೆವ್ ಕರ್‍ಲೆ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:31
23 ತಿಳಿವುಗಳ ಹೋಲಿಕೆ  

ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.


ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.


ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.


ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,


ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.


ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.


ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?


ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?


ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.


“ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು.


ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.


ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.


ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.


ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.


ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು