Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅನಂತರ ಆ ಏಳು ರೊಟ್ಟಿಗಳನ್ನೂ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಸಲ್ಲಿಸಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಟ್ಟರು; ಶಿಷ್ಯರು ಜನರಿಗೆ ಬಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರ ಸ್ತೋತ್ರಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಡಲು ಶಿಷ್ಯರು ಗುಂಪಿನವರಿಗೆ ಹಂಚಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿದನು. ಬಳಿಕ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಅವುಗಳನ್ನು ಜನರಿಗೆ ಹಂಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅನಂತರ ಯೇಸು ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಡಲು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತನ್ನಾ ಜೆಜುನ್ ಸಾತ್ ಭಾಕ್ರಿಯಾ ಅನಿ ತ್ಯಾ ಮೊಸೊಳ್ಯಾ ಘೆಟ್ಲ್ಯಾನ್ ಅನಿ ದೆವಾಕ್ ಧನ್ಯವಾದ್ ದಿವ್ನ್ ಮೊಡ್ಲ್ಯಾನ್ ಲೊಕಾಕ್ನಿ ವಾಟುಕ್ ಮನುನ್ ಶಿಸಾಂಚ್ಯಾ ಹಾತಾತ್ ದಿಲ್ಯಾನ್, ಅನಿ ಶಿಸಾನಿ ಲೊಕಾಕ್ನಿ ವಾಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:36
14 ತಿಳಿವುಗಳ ಹೋಲಿಕೆ  

ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.


ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.


ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.


ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.


ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.


ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,


ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.


ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.


ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು.


ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು