Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!’ ಎಂದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಬೋಧಿಸುವದರಿಂದ ನನಗೆ ಭಕ್ತಿ ತೋರಿಸುವದು ವ್ಯರ್ಥ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇವರು ನನ್ನನ್ನು ಆರಾಧಿಸುವುದೂ ನಿರರ್ಥಕ. ಇವರು ಮನುಷ್ಯರ ಕಟ್ಟಳೆಗಳನ್ನೇ ಉಪದೇಶಿಸುತ್ತಾರೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಮನುಷ್ಯರ ಆಜ್ಞೆಗಳನ್ನು ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ಆರಾಧಿಸುವುದು ವ್ಯರ್ಥ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆನಿ ಮಾಜೆ ಆರಾದನ್ ಕರುನ್ ಫಾಯ್ದೊ ನಾ. ಕಶ್ಯಾಕ್ ಮಟ್ಲ್ಯಾರ್ ತೆನಿ ಮಾಜೆ ಖಾಯ್ದೆ ಸೊಡುನ್ ಮಾನ್ಸಾನ್ ಕರಲ್ಲೆ ಖಾಯ್ದೆ ಲೊಕಾಕ್ನಿ ಶಿಕ್ವುತ್ಯಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:9
24 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.


ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.


ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು.


ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.


ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?


ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.


ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ.


ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.


ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?


ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.


ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು