Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 17:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೂ ನಮ್ಮ ವಿಷಯವಾಗಿ ಅವರು ಬೇಸರಗೊಳ್ಳಬಾರದು; ನೀನು ಸಮುದ್ರಕ್ಕೆ ಹೋಗಿ ಗಾಳಾ ಹಾಕಿ ಮೊದಲು ಸಿಕ್ಕುವ ಮೀನನ್ನು ಎತ್ತು; ಅದರ ಬಾಯಿ ತೆರೆದು ನೋಡಿದರೆ ಅದರಲ್ಲಿ ಒಂದು ರೂಪಾಯಿ ಸಿಕ್ಕುವದು; ಅದನ್ನು ತೆಗೆದುಕೊಂಡು ನಮ್ಮಿಬ್ಬರದಂತ ಹೇಳಿ ಅವರಿಗೆ ಕೊಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ತೆರಿಗೆ ವಸೂಲಿಗಾರರನ್ನು ನಾವೇಕೆ ಕೋಪಗೊಳಿಸಬೇಕು? ನೀನು ತೆರಿಗೆಯನ್ನು ಕೊಡು. ಸರೋವರಕ್ಕೆ ಹೋಗಿ ಮೀನನ್ನು ಹಿಡಿ. ನಿನಗೆ ಸಿಕ್ಕಿದ ಮೊದಲನೇ ಮೀನಿನ ಬಾಯನ್ನು ತೆರೆ, ಅದರ ಬಾಯೊಳಗೆ ವಾರ್ಷಿಕ ತೆರಿಗೆಗೆ ಬೇಕಾದ ಒಂದು ನಾಣ್ಯವನ್ನು ಕಾಣುವೆ. ಅದನ್ನು ತೆಗೆದುಕೊಂಡು ಬಂದು, ತೆರಿಗೆ ವಸೂಲಿ ಮಾಡುವವರಿಗೆ ಕೊಡು. ಅದರಿಂದ ನನ್ನ ಮತ್ತು ನಿನ್ನ ತೆರಿಗೆಯನ್ನು ಕೊಟ್ಟಂತಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಅಮಿ ತೆಂಚೊ ಮನ್ ದುಕ್ವುತಲೊ ನಕ್ಕೊ. ತೆಚೆಸಾಟ್ನಿ ಸಮುಂದರಾಕ್ ಜಾ ಅನಿ ಗರಿ ಟಾಕ್ ಗರಿಕ್‍ಲಾಗಲ್ಲಿ ಪಯ್ಲಿಚಿ ಮಾಸೊಳಿ ಕಾಡ್. ತ್ಯಾ ಮಾಸೊಳಿಚ್ಯಾ ತೊಂಡಾತ್ ದೆವಾಚ್ಯಾ ಗುಡಿಚಿ ಅನಿ ಅಮ್ಚಿ ತೆರ್‍ಗಿ ಭರಿಸರ್ಕ್ಯಾ ಕಿಮ್ತಿಚೊ ಎಕ್ ಪೈಸೊ ಗಾವ್ತಾ. ತೊ ಘೆ ಅನಿ ತೆಂಕಾ ಅಮ್ಚಿ ತೆರ್‍ಗಿ ಮನುನ್ ದಿ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 17:27
27 ತಿಳಿವುಗಳ ಹೋಲಿಕೆ  

ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.


ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.


ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.


ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.


ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ” ಎಂದು ಹೇಳಿದನು.


ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.


ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ?


ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.


ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.


ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ.


ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.


ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.


ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.


ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.


ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು