Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಿಗೆ - ನೀವು ತಿರುಗಿಕೊಂಡು ಚಿಕ್ಕ ಮಕ್ಕಳಂತೆ ಆಗದೆ ಹೋದರೆ ನೀವು ಪರಲೋಕರಾಜ್ಯದಲ್ಲಿ ಸೇರುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಬದಲಾವಣೆ ಹೊಂದಿಕೊಂಡು ನಿಮ್ಮ ಹೃದಯದಲ್ಲಿ ಚಿಕ್ಕ ಮಕ್ಕಳಂತೆ ಆಗಬೇಕು. ಇಲ್ಲವಾದರೆ, ನೀವು ಪರಲೋಕರಾಜ್ಯಕ್ಕೆ ಸೇರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ, “ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತುಮಿ ತುಮ್ಚೆ ಮನ್ ಬದ್ಲುನ್, ಎಕ್ ಬಾರಿಕ್ ಪೊರಾ ಸರ್ಕೆ ಹೊಯ್ನಸ್ಲ್ಯಾರ್ ತುಮ್ಕಾ ಸರ್‍ಗಾಚ್ಯಾ ರಾಜಾತ್ ಭುತ್ತುರ್ ಗುಸುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:3
28 ತಿಳಿವುಗಳ ಹೋಲಿಕೆ  

ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.


ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.


ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.


ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.


ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.


ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.


ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.


ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ


ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ’ ಎಂಬುದೇ.


ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.


ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.


“ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”


ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.


“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.


“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.


ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ,


ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು