Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 18:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತೊಡಕುಗಳು ಬರುವದರಿಂದ ಲೋಕಕ್ಕೆ ಎಷ್ಟೋ ಕೇಡು! ತೊಡಕುಗಳು ಹೇಗಾದರೂ ಬರುವವು. ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ, ಅವನ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜನರನ್ನು ಪಾಪಕ್ಕೆ ನಡೆಸುವ ಸಂಗತಿಗಳ ನಿಮಿತ್ತ ನಾನು ಈ ಲೋಕದ ವಿಷಯದಲ್ಲಿ ದುಃಖಪಡುತ್ತೇನೆ. ಅವು ಯಾವಾಗಲೂ ಇರುತ್ತವೆ. ಆದರೆ ಅವುಗಳಿಗೆ ಕಾರಣವಾಗುವ ವ್ಯಕ್ತಿಗೆ ಬಹಳ ಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹ್ಯಾ ಜಗಾಚಿ ಗತ್ ಕಾಯ್ ಸಾಂಗು! ಲೊಕಾನಿ ಅಪ್ನಾಚೊ ವಿಶ್ವಾಸ್ ಕಳ್ದುನ್ ಘೆವ್ಕ್ ಕಾರನ್ ಹೊತಲ್ಯಾ ಹ್ಯಾ ಸಂಗ್ತಿಯಾ ಕನ್ನಾಬಿ ಹೊವ್ನ್‌ಗೆತುಚ್ ರ್‍ಹಾತ್ಯಾತ್. ಖರೆ ತ್ಯಾ ಸಂಗ್ತಿಯಾ ಹೊಯ್ ಸರ್ಕೆ ಕರುಕ್ ಕಾರನ್ ಹೊತಲ್ಯಾಂಚಿ ಗತ್ ಕಾಯ್ ಸಾಂಗು!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 18:7
30 ತಿಳಿವುಗಳ ಹೋಲಿಕೆ  

ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?


ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.


ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.


ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.


ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.


ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.


ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.


“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.


ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.


ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.


ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.


ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು