Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹೆರೋದನು ಸತ್ತನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಯೋಸೇಫನು ಈಜಿಪ್ಟಿನಲ್ಲಿ ಇರುವಾಗಲೇ ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೆರೋದನು ಸತ್ತಮೇಲೆ ಈಜಿಪ್ಟಿನಲ್ಲಿದ್ದ ಯೋಸೇಫನಿಗೆ ಕರ್ತನ ದೂತನು ಕನಸಿನಲ್ಲಿ ಕಾಣಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹೆರೊದ್ ರಾಜಾ ಮರಲ್ಲ್ಯಾ ತನ್ನಾ ಸರ್ವೆಸ್ವರಾಚೊ ದುತ್ ಅನಿ ಎಗ್ದಾ ಇಜಿಪ್ತಾತ್ ಜುಜೆಕ್ ಸಪ್ನಾತ್ ದಿಸ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 2:19
13 ತಿಳಿವುಗಳ ಹೋಲಿಕೆ  

ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.


ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”


“ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’


ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?


ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


“ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು