Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ಕೂಲಿ ತಕ್ಕೊಂಡು ಹೋಗು; ನಿನಗೆ ಕೊಟ್ಟಂತೆ ಕಡೆಗೆ ಬಂದ ಇವನಿಗೂ ಕೊಡುವದಕ್ಕೆ ನನಗೆ ಮನಸ್ಸುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ನೀನು ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು. ನಾನು ನಿನಗೆ ಎಷ್ಟು ಕೂಲಿ ಕೊಟ್ಟೆನೋ ಅಷ್ಟೇ ಕೂಲಿಯನ್ನು ಕೊನೆಗೆ ಗೊತ್ತುಮಾಡಲ್ಪಟ್ಟವನಿಗೂ ಕೊಡಲು ಇಷ್ಟಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಕೂಲಿ ತೆಗೆದುಕೊಂಡು ಹೋಗು. ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವುದು ನನ್ನ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅತ್ತಾ ತುಜಿ ಸಾಂಗಲ್ಲಿ ಮಜುರಿ ಘೆ ಅನಿ ಘರಾಕ್ ಜಾ; ಆಕ್ರಿಕ್ ಯೆಲ್ಲ್ಯಾ ಹೆಕಾಬಿ ತುಕಾ ದಿಲ್ಲಿ ತವ್ಡಿಚ್ ಮಜುರಿ ದಿತಲಿ ಮಾಜಿ ಕುಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:14
13 ತಿಳಿವುಗಳ ಹೋಲಿಕೆ  

ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.


ಅದಕ್ಕೆ ತಂದೆಯು, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ ಮತ್ತು ನನ್ನದೆಲ್ಲಾ ನಿನ್ನದೇ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.


“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.


ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?


ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು