Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಆತನು ಅವರಿಗೆ - ನನ್ನ ಪಾತ್ರೆಯಲ್ಲಿ ನೀವು ಕುಡಿಯುವಿರಿ ಸರಿ; ಆದರೆ ನನ್ನ ಎಡಬಲಗಡೆಗಳಲ್ಲಿ ಕೂತುಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದಕ್ಕೆ ಯೇಸು, “ನನ್ನ ಪಾತ್ರೆಯಿಂದ ನೀವು ಕುಡಿಯುವಿರಿ, ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ, ನನ್ನ ತಂದೆಯಿಂದ ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಜೆಜುನ್ ತೆಂಕಾ,“ ತುಮಿ ಮಿಯಾ ಫಿತಲ್ಯಾ ಕಸ್ಟಾಚ್ಯಾ ಆಯ್ದಾನಾತ್ಲೆ ತುಮಿ ಫಿತ್ಯಾಶಿ ತೆ ಖರೆ ಹಾಯ್. ಖರೆ ಕೊನ್ ಮಾಜ್ಯಾ ಉಜ್ವ್ಯಾಬಾಜುಕ್ ಅನಿ ರೊಡ್ಡ್ಯಾ ಬಾಜುಕ್ ಬಸ್ತಲೆ ಮನುನ್ ಎಚುನ್ ಕಾಡ್ತಲೊ ಅದಿಕಾರ್ ಮಾಕಾ ನಾ. ಜೆ ಕೊನಾಕ್ ತೊ ಜಾಗೊ ಮಾಜ್ಯಾ ಬಾಬಾನ್ ತಯಾರ್ ಕರುನ್ ಥವ್ಲ್ಯಾನಾಯ್ ತೆಂಕಾ ತೊ ಗಾವ್ತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:23
12 ತಿಳಿವುಗಳ ಹೋಲಿಕೆ  

ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.


ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”


ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರವೇ ಆದರಣೆಯೂ ಪಾಲುಗಾರರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು