Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಅಣ್ಣತಮ್ಮಂದಿರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಶಿಷ್ಯರ ಮೇಲೆ ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬೇರೆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹುರಲ್ಲ್ಯಾ ಧಾ ಶಿಸಾನಿ ಹೆ ಆಯಿಕ್ಲ್ಯಾನಿ. ತನ್ನಾ ತೆಕಾ ಹ್ಯಾ ದೊನ್ ಭಾವಾಂಚ್ಯಾ ವರ್‍ತಿ ರಾಗ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:24
13 ತಿಳಿವುಗಳ ಹೋಲಿಕೆ  

ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.


ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.


ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು.


ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.


ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.


ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.


ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು