Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು - ಮಗನೇ, ಹೋಗಿ ಈ ಹೊತ್ತು ದ್ರಾಕ್ಷೇತೋಟದಲ್ಲಿ ಕೆಲಸಮಾಡು ಅಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು. ಆ ಮನುಷ್ಯನು ಮೊದಲನೆಯ ಮಗನ ಬಳಿಗೆ ಹೋಗಿ, ‘ಮಗನೇ ಈ ದಿನ ನೀನು ಹೋಗಿ, ನನ್ನ ದ್ರಾಕ್ಷಿತೋಟದಲ್ಲಿ ಕೆಲಸ ಮಾಡು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅನಂತರ ಯೇಸು, “ನಿಮಗೇನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷಿಯ ತೋಟದಲ್ಲಿ ಕೆಲಸ ಮಾಡು,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅತ್ತಾ ತುಮಿ ಕಾಯ್ ಮನ್ತ್ಯಾಶಿ? ಎಗ್ದಾ ಎಕ್ ಮಾನುಸ್ ಹೊತ್ತೊ, ತೆಕಾ ದೊನ್ ಲೆಕಾ ಹೊತ್ತಿ. ತೊ ಮೊಟ್ಯಾ ಲೆಕಾಕ್ಡೆ ಜಾತಾ ಅನಿ,“ಲೆಕಾ ಆಜ್ ತಿಯಾ ದರಾಕ್ಷಿಚ್ಯಾ ಮಳ್ಯಾತ್ ಜಾ ಅನಿ ಕಾಮ್ ಕರ್”. ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:28
13 ತಿಳಿವುಗಳ ಹೋಲಿಕೆ  

ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.


“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.


ಅದು ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.


ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?


“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.


ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.


ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.


ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.


ಅನಂತರ ಅವರು, “ನಾವರಿಯೆವು” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಆತನು ಅವರಿಗೆ, “ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೋ ಅದನ್ನು ನಾನು ಸಹ ನಿಮಗೆ ಹೇಳುವುದಿಲ್ಲ.


ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು