Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಅವನು, ‘ನಾನು ಹೋಗುವುದಿಲ್ಲ’ ಎಂದು ಉತ್ತರವಿತ್ತ. ಆದರೂ ಅನಂತರ ಪಶ್ಚಾತ್ತಾಪಪಟ್ಟು ಅವನು ತೋಟಕ್ಕೆ ಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನು - ನಾನು ಹೋಗುವದಿಲ್ಲವೆಂದು ಹೇಳಿದಾಗ್ಯೂ ತರುವಾಯ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಅದಕ್ಕೆ ಮಗನು, ‘ನಾನು ಹೋಗುವುದಿಲ್ಲ’ ಎಂದನು. ಆದರೆ ಆ ಬಳಿಕ ತನ್ನ ಮನಸ್ಸನ್ನು ಬದಲಾಯಿಸಿಕೊಂಡು ಕೆಲಸಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಮಗನು ಉತ್ತರವಾಗಿ, ‘ನಾನು ಹೋಗುವುದಿಲ್ಲ’ ಎಂದು ಹೇಳಿ, ಅನಂತರ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ತೊ ಲೆಕ್ ಮಿಯಾ ಜಾಯ್ನಾ ಮನ್ತಾ. ಖರೆ ಮಾನಾ ತೊ ಅಪ್ನಾಚೊ ಮನ್ ಬದಲ್ತಾ ಅನಿ ಬಾಬಾನ್ ಸಾಂಗಲ್ಲ್ಯಾ ಸರ್ಕೆ ಕಾಮಾಕ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:29
19 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು? ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು.


“ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.


ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.


ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು


ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.


ಆಗ ಮೋಶೆಯು ಆರೋನನಿಗೆ, ತನ್ನನ್ನು ಕಳುಹಿಸಿದ ಯೆಹೋವನ ಎಲ್ಲಾ ಮಾತುಗಳನ್ನೂ, ತನಗೆ ಆಜ್ಞಾಪಿಸಿದ ಸೂಚಕಕಾರ್ಯಗಳನ್ನೂ, ತಾನು ಮಾಡಿದವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು