Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಅವರು ನಿಮಗೆ ಏನೇನು ಹೇಳುತ್ತಾರೋ ಅದನ್ನೆಲ್ಲಾ ಮಾಡಿರಿ, ಕಾಪಾಡಿಕೊಳ್ಳಿರಿ; ಆದರೆ ಅವರ ನಡತೆಯ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೇ ಹೊರತು ನಡೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಅವರು ನಿಮಗೆ ಹೇಳುವುದನ್ನೆಲ್ಲಾ ಅನುಸರಿಸಿ ನಡೆಯಿರಿ. ಆದರೆ ಅವರ ನಡತೆಗಳ ಪ್ರಕಾರ ನೀವು ನಡೆಯಬೇಡಿರಿ. ಏಕೆಂದರೆ ಅವರು ಹೇಳಿದಂತೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಮನುನ್ ತೆನಿ ಕಾಯ್ ಕರುಚೆ ಮನುನ್ ಸಾಂಗ್ತ್ಯಾತ್ ತೆ ಸಗ್ಳೆ ತುಮಿ ಕರಾ ಅನಿ ಪಾಳಾ; ಖರೆ ತೆಂಚ್ಯಾ ಚಲ್ನುಕಿ ಸರ್ಕೆ ತುಮಿ ಚಲುನಕಾಶಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಶಿಕ್ವುತಾತ್ ಖರೆ ತೆಚ್ಯಾ ಸರ್ಕೆ ಚಲಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:3
16 ತಿಳಿವುಗಳ ಹೋಲಿಕೆ  

ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.


ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.


ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು.


“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ;


ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು