Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಎಲೈ ಸರ್ಪಗಳೇ, ವಿಷಸರ್ಪಗಳ ಪೀಳಿಗೆಯೇ, ನರಕ ದಂಡನೆಯಿಂದ ನೀವು ಹೇಗೆ ತಾನೆ ಪಾರಾಗುವಿರಿ? ಇಗೋ ಕೇಳಿ: ‘ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಪಂಡಿತರನ್ನೂ ಧರ್ಮಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಗೆ ಹೇಗೆ ತಪ್ಪಿಸಿಕೊಂಡೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ನೀವು ಸರ್ಪಗಳು! ನೀವು ವಿಷಕರವಾದ ಹಾವುಗಳ ಕುಟುಂಬದವರು! ನೀವು ದೇವರಿಂದ ತಪ್ಪಿಸಿಕೊಳ್ಳಲಾರಿರಿ. ನೀವೆಲ್ಲರು ಅಪರಾಧಿಗಳೆಂಬ ತೀರ್ಪುಹೊಂದಿ ನರಕಕ್ಕೆ ಹೋಗುವಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಸಾಪಾ ಸರ್ಕೆ ತುಮಿ, ಅನಿ ಸಾಪಾಚಿ ಪಿಳ್ಗಿ ತುಮಿ! ನರ್‍ಕಾತ್ ಜಾತಲ್ಯಾ ಶಿಕ್ಷಾತ್ನಾ ಚುಕ್ವುನ್ ಘೆವ್ಕ್ ಹೊತಾ ಮನುನ್ ತುಮ್ಚ್ಯಾನ್ ಯೌಜುಕ್ ತರ್ ಕಶೆ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:33
17 ತಿಳಿವುಗಳ ಹೋಲಿಕೆ  

ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?


ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.


ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು